ಬೆಂಗಳೂರು, ಅಕ್ಟೋಬರ್ 10 (ಕರ್ನಾಟಕ ವಾರ್ತೆ) :
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನ ಸೌಧದ ಕೊಠಡಿ ಸಂಖ್ಯೆ 334ರಲ್ಲಿ ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಜಮೀನು ಗುರುತಿಸುವ, ಕೆಂಪೇಗೌಡ ಬಡಾವಣೆ, ಬನಶಂಕರಿ ಬಡಾವಣೆ ಮತ್ತು ಇತರೆ ಬಡಾವಣೆಗಳಲ್ಲಿ ಅಭಿವೃದ್ಧಿ ಪಡಿಸಿರುವ ನಿವೇಶನಗಳ ಕುರಿತು ಅರಣ್ಯ ಇಲಾಖೆಯ ತಕರಾರು ಹಾಗೂ ತಿಪ್ಪಗೊಂಡನಹಳ್ಳಿ ಜಲಾಶಯದ ವ್ಯಾಪ್ತಿಯಲ್ಲಿ ಬರುವ ವಿವಿಧ ವಲಯಗಳಿಗೆ ನಿಗದಿಯಾಗಿರುವ ಬಫರ್ ಅಂತರವನ್ನು ಕಡಿಮೆ ಅಥವಾ ಪುನರ್ ನಿಗದಿ ಮಾಡುವ ವಿಷಯಗಳ ಕುರಿತು ಸಭೆ ನಡೆಯಿತು.
ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಲೋಕಸಭಾ ಸಂಸದರಾದ ಸದಾನಂದ ಗೌಡ, ಡಿ.ಕೆ.ಸುರೇಶ್, ಶಾಸಕರಾದ ಎಸ್.ಟಿ.ಸೋಮಶೇಖರ್, ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ರವಿ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುμÁರ್ ಗಿರಿನಾಥ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಯರಾಂ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.




