23 C
Karnataka
Saturday, March 21, 2026
spot_img

ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ರಾಜ್ಯಪಾಲರು

ಬೆಂಗಳೂರು, ನವೆಂಬರ್ 06 (ಕರ್ನಾಟಕ ವಾರ್ತೆ) :

ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸೋಮವಾರ ಗಾಂಧಿ ಸ್ಮಾರಕದಲ್ಲಿ ಸ್ಪೇμï ಮೀಡಿಯಾ, ಅದಾನಿ ಗ್ರೂಪ್ ವತಿಯಿಂದ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸಾಧಕರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದರು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಧರ್ಮವು “ಸರ್ವ ಧರ್ಮ ಸಂಭವ” ಎಂಬ ಮನೋಭಾವದಿಂದ ಪ್ರೇರಿತವಾಗಿದೆ. ನಮ್ಮ ಸಂಸ್ಕøತಿಯು ಯಾವಾಗಲೂ ವಿಶ್ವ ಭ್ರಾತೃತ್ವ ಮತ್ತು ವಿಶ್ವ ಶಾಂತಿ ಮತ್ತು ಸಮಾನತೆ ಮತ್ತು ಸಾಮರಸ್ಯವನ್ನು ಪ್ರೇರೇಪಿಸುತ್ತದೆ. ಇಲ್ಲಿ ಧರ್ಮ ಮತ್ತು ಸಂಸ್ಕೃತಿಯಲ್ಲಿ ಸಮನ್ವಯ ಮತ್ತು ಸಾಮರಸ್ಯದ ದೃಷ್ಟಿ ಗೋಚರಿಸುತ್ತದೆ. ವಿಶ್ವದಲ್ಲಿ ಏಕತೆಯ ಸಾರ್ವತ್ರಿಕ ಭಾವನೆಯನ್ನು ಉತ್ತೇಜಿಸಲು ಭಾರತವು ಕೆಲಸ ಮಾಡುತ್ತಿದೆ, ಅದಕ್ಕಾಗಿಯೇ ಇಂದು ವಿಶ್ವದ ಅನೇಕ ದೇಶಗಳು ವಿಶ್ವ ಶಾಂತಿ ಮತ್ತು ಮಾನವ ಕಲ್ಯಾಣಕ್ಕಾಗಿ ಭಾರತದತ್ತ ಮುಖ ಮಾಡುತ್ತಿವೆ ಎಂದರು.

ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡುವಲ್ಲಿ ಮಹತ್ವದ ಕೊಡುಗೆ ನೀಡಿದ ಭಾರತೀಯ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಮಹಾತ್ಮ ಗಾಂಧೀಜಿಯವರ ಸ್ಮರಣಾರ್ಥ ಸ್ಪೇಸ್ ಮೀಡಿಯಾ ಮಹಾತ್ಮಾ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಗೌರವ ಸಮಾರಂಭವನ್ನು ಆಯೋಜಿಸಿ, ಸಾಧಕರಿಗೆ ಗೌರವಿಸುತ್ತಿರುವುದು ಸಂತಸ ತಂದಿದೆ. ಸ್ಪೇಸ್ ಮೀಡಿಯಾ ಬೆಂಗಳೂರು ರಾಜ್ಯದ ಕಲೆ, ಸಾಹಿತ್ಯ ಮತ್ತು ಸಂಸ್ಕøತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿದ್ದು, ಭಾರತೀಯ ಇತಿಹಾಸ, ಸಂಸ್ಕøತಿ ಮತ್ತು ಸಂಪ್ರದಾಯಗಳನ್ನು ಸಂರಕ್ಷಿಸುವ, ಪ್ರಚಾರ ಮಾಡುವಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿದೆ ಎಂದು ಪ್ರಶಂಸಿದರು.

ಕೋಮು ಸೌಹಾರ್ದತೆ, ರಾಷ್ಟ್ರೀಯ ಏಕತೆ ಮತ್ತು ಶಾಂತಿಯನ್ನು ಉತ್ತೇಜಿಸುವ ಮತ್ತು ಶಿಕ್ಷಣ, ಆರೋಗ್ಯ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಅವರ ಅತ್ಯುತ್ತಮ ಕೊಡುಗೆಗಾಗಿ ಮತ್ತು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆಯನ್ನು ಹೆಚ್ಚಿಸುವ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಿರುವುದು ಸಂತೋಷದ ವಿಷಯವಾಗಿದೆ. ಈ ಎಲ್ಲಾ ಮಹಾನ್ ವ್ಯಕ್ತಿಗಳನ್ನು ಅಭಿನಂದಿಸುತ್ತೇನೆ ಹಾಗೂ ನೀವು ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುವುದನ್ನು ಮುಂದುವರೆಸಿರಿ ಎಂದು ಹಾರೈಸಿದರು.

“ಸರ್ವೇ ಭವಂತು ಸುಖಿನಃ ಸರ್ವೇ ಸಂತು ನಿರಾಮಯಾಃ” ಎಂಬ ಮನೋಭಾವದಿಂದ ಮಾನವ ಸೇವೆ, ಸಮಾಜ ಸೇವೆ ಮತ್ತು ರಾಷ್ಟ್ರಹಿತದಲ್ಲಿ ಕೆಲಸ ಮಾಡುವವರನ್ನು ಧರ್ಮ, ಸಂಸ್ಕೃತಿ ಮತ್ತು ಪರೋಪಕಾರದ ಸರಿಯಾದ ಮಾರ್ಗವನ್ನು ಅನುಸರಿಸಿ ಸಮಾಜವು ಅವರನ್ನು ಗೌರವದಿಂದ ನೋಡುತ್ತದೆ ಮತ್ತು ಗೌರವಿಸುತ್ತದೆ. ಇತರರ ಹಿತಾಸಕ್ತಿಗಳನ್ನು ನೋಡಿಕೊಳ್ಳುವ ವ್ಯಕ್ತಿ. ಸ್ಥಾನಮಾನ, ಪ್ರತಿμÉ್ಠ, ದುರಾಸೆಗಳನ್ನು ಬಯಸದೆ ಇತರರಿಗೆ ಗೌರವ ನೀಡುವ ವ್ಯಕ್ತಿಯನ್ನು ಎಲ್ಲರೂ ಗೌರವಿಸುತ್ತಾರೆ. ಅಂತಹ ವ್ಯಕ್ತಿಗಳು ಇಡೀ ಸಮಾಜಕ್ಕೆ ಉದಾಹರಣೆಯಾಗಿರುತ್ತಾರೆ ಎಂದು ಹೇಳಿದರು.

ನಮ್ಮ ದೇಶದಲ್ಲಿ ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಸಂಪತ್ತು ಮತ್ತು ವೈಭವವನ್ನು ತ್ಯಾಗ ಮಾಡಿದ್ದಾರೆ ಮತ್ತು ದೇಶ, ಸಮಾಜದ ಕಲ್ಯಾಣಕ್ಕಾಗಿ ಮತ್ತು ಧರ್ಮ ಮತ್ತು ಸಂಸ್ಕøತಿಯನ್ನು ಬಲಪಡಿಸಲು ಸೇವೆಯನ್ನು ಮಾಡುತ್ತಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳಿಂದ ಪ್ರೇರಣೆ ಪಡೆದು ಪರೋಪಕಾರದ ಮನೋಭಾವನೆಯಿಂದ ಮಾನವ ಸೇವೆ, ಸಮಾಜಸೇವೆ, ದೇಶಸೇವೆಯನ್ನು ಮಾಡಬೇಕು ಎಂದು ಕರೆ ನೀಡಿದರು.

ಇಂದು ವಿಶ್ವದ ಅನೇಕ ದೇಶಗಳು ವಿಶ್ವ ಶಾಂತಿ ಮತ್ತು ಮಾನವ ಕಲ್ಯಾಣಕ್ಕಾಗಿ ಭಾರತದತ್ತ ಮುಖ ಮಾಡುತ್ತಿವೆ. ನಿಮ್ಮಂತಹ ಮಹಾನ್ ವ್ಯಕ್ತಿಗಳು ದೇಶದ ಸ್ವಾತಂತ್ರ್ಯ ಮತ್ತು ನಂತರದ ಸ್ವಾತಂತ್ರ್ಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ, ಇದರಿಂದಾಗಿ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ ಮತ್ತು ದೇಶದ ಆರ್ಥಿಕತೆಯು ಬಲಿಷ್ಠವಾಗಿದೆ ಎಂದು ಹೇಳಿದರು.

ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ.  ದೇಶವನ್ನು ಮತ್ತಷ್ಟು ಬಲಪಡಿಸುವ ಮೂಲಕ ವಿಶ್ವದ ಅತಿದೊಡ್ಡ ಆರ್ಥಿಕತೆಯನ್ನು ಮಾಡಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ಕರ್ನಾಟಕ ಸರ್ಕಾರ ಪ್ರಯತ್ನಿಸುತ್ತಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವಲ್ಲಿ ಮತ್ತು ಪರಿಸರ ಸಂರಕ್ಷಣೆ ಸಾರ್ವಜನಿಕರ ಪಾತ್ರವೂ ಪ್ರಮುಖವಾಗಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಅಧ್ಯಕ್ಷರಾದ ಯು.ಟಿ.ಖಾದರ್, ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್, ಕಾರ್ಯಕ್ರಮ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಶೇಷಶಯನ, ಡಾ.ಎಂ.ಎಸ್. ರವಿರಾಜ್, ಕನ್ನಡ ಚಲನಚಿತ್ರ ಕಲಾವಿದ ಜಯರಾಮ ಕೃಷ್ಣ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!