ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.18: ತಾಲೂಕು ಆಡಳಿತದಿಂದ ನವೆಂಬರ್ 30 ರಂದು ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಜಯಂತಿ ಪೂರ್ವಭಾವಿ ಸಭೆಯನ್ನು ನವೆಂಬರ್ 22 ರಂದು ಬೆಳಿಗ್ಗೆ 11.30 ಗಂಟೆಗೆ ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲೂಕು ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು, ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆ ನೀಡಬೇಕೆಂದು ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.