20.9 C
Karnataka
Wednesday, February 5, 2025
spot_img

ಕಾಮಗಾರಿಗಳಲ್ಲಿ ಭ್ರಷ್ಟಾಚಾರ: ಮಾಹಿತಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ನವೆಂಬರ್ 21 (ಕರ್ನಾಟಕ ವಾರ್ತೆ) :

ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ನಡೆಯುತ್ತಿರುವ ಪ್ಯಾಕೇಜ್ ಪದ್ಧತಿ, ಬಾಕಿ ಮೊತ್ತ ಬಿಡುಗಡೆ ಮತ್ತು ಟೆಂಡರ್ ಪ್ರಕ್ರಿಯೆ, ಇತ್ಯಾದಿಗಳಲ್ಲಿ ಶೇಕಡ 40 ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಲಂಚಗುಳಿತನ / ಭ್ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್, ಬೆಂಗಳೂರು ಇವರು ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಆರೋಪಗಳ ಕುರಿತು ತನಿಖೆಯನ್ನು ನಡೆಸಲು ರಚಿಸಲಾಗಿರುವ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ರವರ ನೇತೃತ್ವದಲ್ಲಿ ವಿಚಾರಣಾ ಆಯೋಗವು ನೇಮಿಸಿದ್ದು, ದಿನಾಂಕ 26.07.2019 ರಿಂದ 31-03-2023 ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ತನಿಖೆ ನಡೆಸುತ್ತಿದೆ.

ಸಾರ್ವಜನಿಕರು ಯಾವುದೇ ರೀತಿಯ ಸಲಹೆ / ಆಕ್ಷೇಪಣೆ / ಅಹವಾಲು ಹೇಳಿಕೆಗಳು / ದಾಖಲೆಗಳು ಇದ್ದರೆ ಸಲ್ಲಿಸಲು ನವೆಂಬರ್ 29ರವರೆಗೆ  ಅವಧಿಯನ್ನು ವಿಸ್ತರಿಸಲಾಗಿದೆ.  
ಮಾಹಿತಿಯನ್ನು ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್, ವಿಚಾರಣಾ ಆಯೋಗ, 3ನೇ ಮಹಡಿ – ಲೋಕೋಪಯೋಗಿ ಇಲಾಖೆ ಮುಖ್ಯ ಕಟ್ಟಡ, ಕೆ.ಆರ್.ವೃತ್ತ,ಬೆಂಗಳೂರು 560001 ಕಛೇರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಅಥವಾ ಇ-ಮೇಲ್ justicenmdasinquirycommission@gmail.com  ಮೂಲಕ ಸಲ್ಲಿಸಬೇಕು ಎಂದು ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!