ಬೆಂಗಳೂರು, ನವೆಂಬರ್ 29 (ಕರ್ನಾಟಕ ವಾರ್ತೆ):
ಬೆಂಗಳೂರು ಅರಮನೆಯಲ್ಲಿ ನವೆಂಬರ್ 29 ರಿಂದ ಡಿಸೆಂಬರ್ 1 ರವರೆಗೆ 3 ದಿನಗಳ ಕಾಲ ಹಮ್ಮಿಕೊಳ್ಳಲಾದ ಬೆಂಗಳೂರು ಟೆಕ್ ಸಮ್ಮಿಟ್ನ 26 ನೇ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್, ವಿದ್ಯುನ್ಮಾನ ಐಟಿ-ಬಿಟಿ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಏಕ್ರೂಪ್ ಕೌರ್, ಇನ್ವೆಸ್ಟ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕಿ ನಿವೃತಿ ರೈ, ವಿಪ್ರೋ ಕಾರ್ಯನಿರ್ವಾಹಕ ಅಧ್ಯಕ್ಷರಾದ ರಿಷಾದ್ ಪ್ರೇಮ್ ಜಿ, ಸಾಫ್ಟ್ವೇರ್ ಟೆಕ್ನಾಲಜಿ ಪಾಕ್ರ್ಸ್ ಆಫ್ ಇಂಡಿಯಾ ನಿರ್ದೇಶಕರಾದ ಅರವಿಂದಕುಮಾರ್, ಬಯೋಕಾನ್ ಲಿಮಿಟೆಡ್ ಕಾರ್ಯನಿರ್ವಾಹಕ ಅಧ್ಯಕ್ಷರಾದ ಡಾ. ಕಿರಣ್ ಮಜುಮ್ದಾರ್ ಷಾ, ಇನ್ಫೋಸಿಸ್ ಸಹ ಸಂಸ್ಥಾಪಕರಾದ ಕ್ರಿಸ್ ಗೋಪಾಲಕೃಷ್ಣನ್, ಆಕ್ಸೆಲ್ ಪಾರ್ಟ್ನರ್ಸ್ ಇಂಡಿಯಾದ ಸಂಸ್ಥಾಪಕ ಪಾಲುದಾರರಾದ ಪ್ರಶಾಂತ್ ಪ್ರಕಾಶ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
