28.5 C
Karnataka
Sunday, March 22, 2026
spot_img

ಶೇಖಡಾ 50%ರ ರಿಯಾಯಿತಿ ದರಗಳಲ್ಲಿ  ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮಾರಾಟ

ಬೆಂಗಳೂರು, ಡಿಸೆಂಬರ್ 30 (ಕರ್ನಾಟಕ ವಾರ್ತೆ):

ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50% ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಪುಸ್ತಕ ಪ್ರಿಯರು ಬೆಂಗಳೂರಿನ ಕನ್ನಡಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಸಂಪರ್ಕ ಸಂಖ್ಯೆ:    080-22107705 ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ  ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆ ವಿಭಾಗ ಆನ್ ಲೈನ್ www.kannadapustakapradhikara.com  ನಲ್ಲಿ ಕೂಡ ಈ ಶೇ.50% ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆಡಳಿತಾಧಿಕಾರಿ ಕೆ.ಬಿ.ಕಿರಣ್‍ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!