ಬೆಂಗಳೂರು, ಜನವರಿ 24 (ಕರ್ನಾಟಕ ವಾರ್ತೆ) :
ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಶಾಸಕರುಗಳಾದ ಡಿ.ಎಸ್. ಅರುಣ್ ಹಾಗೂ ಸೂರಜ್ ರೇವಣ್ಣ ಇವರನ್ನು ಕುವೆಂಪು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯದ ಅಧಿನಿಯಮ 2000ದ ಪ್ರಕರಣ 30(i)(v)ರನ್ವಯ ಸದಸ್ಯರುಗಳನ್ನಾಗಿ ಜನವರಿ 17ರಂದು ಮಾನ್ಯ ಸಭಾಪತಿಯವರು ನಾಮನಿರ್ದೇಶನ ಮಾಡಿರುತ್ತಾರೆಂದು ಕರ್ನಾಟಕ ವಿಧಾನ ಪರಿಷತ್ತಿನ ಶಾಸನ ರಚನಾ ಶಾಖೆಯ ಅಧೀನ ಕಾರ್ಯದರ್ಶಿ ಕೆ. ರೇಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.